ನಲ್ಮೆಯ ಗೆಳೆಯ -ಗೆಳತಿಯರಿಗೆಲ್ಲ ನನ್ನ ಹೃದಯವಾಣಿಗೆ ಪ್ರೀತಿಯ ಆದರದ ಸ್ವಾಗತ... ನನ್ನ ಮನದಾಳದ ಮಾತು ಇಲ್ಲಿ ಬಿಂಬಿಸಿದ್ದೇನೆ ಬಿಡುವಿದ್ದಾಗ ಓದಿ ಮನಸ್ಸಿನ ನೋವನ್ನು ಸ್ವಲ್ಪ ಹಗುರ ಮಾಡಿಕೊಳ್ಳಿ ಜೊತೆಗೆ ಸಲಹಿ ಹಾರೈಸಿ :))

Search This Blog

Thursday, October 31, 2013

ಬೇಕು-ಬೇಡ ಎನ್ನುವ ಬೆಳೆ-ಕಳೆಯ ಕಾದಾಟ!


***********************************************************************************************
ಬದುಕೆಂಬ ಹೊಲದಲ್ಲಿ ಬೇಕು ಎನ್ನುವ ಬೆಳೆಯನ್ನು ಬಿತ್ತುತ್ತಾ ಹೋದಷ್ಟು ಬೇಡವಾದ ಸಮಸ್ಯೆಗಳು, ಕಳೆಗಳು, ಹುಳ-ಹುಪ್ಪಟೆಗಳು ಹೆಚ್ಚಾಗುತ್ತಾ ನಮ್ಮ ಬೇಕೆನ್ನುವ ಬೆಳೆಯ ನಾಶ ಮಾಡುತ್ತವೆ, ಅದಕ್ಕಾಗಿಯೆ ಆದಷ್ಟು ನಮಗೆ ಬೇಕು ಎನ್ನುವ ಆ ಬೆಳೆಯನ್ನು ಪೋಷಿಸಿ ಬೆಳೆಸುವುದು, ನಮ್ಮೆಲ್ಲರ ಹೊಣೆಯೇ ಹೊರತು ಅದಕ್ಕೆ ಪ್ರಕೃತಿ ಹೊಣೆಯಲ್ಲ. ನಮ್ಮ ಕೆಲಸ ಕೇವಲ ನಮಗೆ ಬೇಕಾದುದನ್ನು ಆರಿಸಿಕೊಳ್ಳುವುದು, ಬೆಳೆಸುವುದು ಮತ್ತು ಉಳಿಸಿಕೊಳ್ಳುವುದೇ ಹೊರತು ಪ್ರಜ್ಞಾಹೀನರಾಗಿ ಕೂರುವುದಲ್ಲ. ಹುಟ್ಟಿದಾಗ ಬರುವ ಈ ಪ್ರಜ್ಞೆ ಜ್ಞಾನವಾಗಿ ನಂತರ ಸತ್ತಾಗ ಪ್ರಜ್ಞಾಹೀನವಾಗುವುದು ಇದ್ದೇ ಇದೆ. ಸಾಯುವ ಮುಂಚೆಯೇ ಈ ಪ್ರಜ್ಞಾಹೀನರಾಗುವುದು ಎಷ್ಟು ಸರಿ! ಪ್ರಕೃತಿ ನಮ್ಮ ಹುಟ್ಟಿದಂದಿನಿಂದ ನಮಗೆ ಬೇಕಾದುದನ್ನು ಆರಿಸಿಕೊಳ್ಳಲು ಬಿಟ್ಟಿರುವಾಗ ನಮ್ಮ ಸಾವನ್ನು ಅದಕ್ಕೆ ಏಕೆ ಆಯ್ಕೆ ಮಾಡಿಕೊಳ್ಳಲು ಬಿಡಬಾರದು. ಈ ಆತ್ಮಹತ್ಯೆಯಿಂದ ಪ್ರಕೃತಿಗೆ ನೀನು ಮೋಸ ಮಾಡುತ್ತಿಲ್ಲವೇ ಓ ಮನುಜ? ಆತ್ಮಹತ್ಯೆ ಮಾಡಿಕೊಳ್ಳುವ ಹಕ್ಕು ನಿನಗಿಲ್ಲ. ಉಸಿರಲಿ ಉಸಿರಾಗಿ ಪ್ರಕೃತಿಯೇ ನಿನ್ನ ಕರೆದೊಯ್ಯುವ ತನಕ ಉಸಿರಾಡುವುದ ನೀನೆಂದಿಗೂ ಮರೆಯದಿರು. ನಿನ್ನ ಬೇಕು ಬೇಡಗಳ ನಡುವಿನ ಅಂತರವನ್ನು ಅರ್ಥ ಮಾಡಿಕೊಂಡು ಕೊನೆಯ ಉಸಿರಿರುವತನಕ ಪ್ರಕೃತಿಯು ದಯಪಾಲಿಸುವ ಬುದ್ದಿ ನೀ ಅರಿತು ಪ್ರಕೃತಿಯ ಒಳಗೊಂದು ಪ್ರಕೃತಿ ನಿನಾಗೋ ಓ ಮೂಢ!
***********************************************************************************************

No comments:

Post a Comment