ನಲ್ಮೆಯ ಗೆಳೆಯ -ಗೆಳತಿಯರಿಗೆಲ್ಲ ನನ್ನ ಹೃದಯವಾಣಿಗೆ ಪ್ರೀತಿಯ ಆದರದ ಸ್ವಾಗತ... ನನ್ನ ಮನದಾಳದ ಮಾತು ಇಲ್ಲಿ ಬಿಂಬಿಸಿದ್ದೇನೆ ಬಿಡುವಿದ್ದಾಗ ಓದಿ ಮನಸ್ಸಿನ ನೋವನ್ನು ಸ್ವಲ್ಪ ಹಗುರ ಮಾಡಿಕೊಳ್ಳಿ ಜೊತೆಗೆ ಸಲಹಿ ಹಾರೈಸಿ :))

Search This Blog

Sunday, October 20, 2013

ಆಯುಧ ಪೂಜೆಯಲ್ಲೂ ಆಧುನೀಕತೆ / ಆಧುನೀಕತೆಯಲ್ಲಿ ಆಡಂಬರದ ಭಕ್ತಿ!

***********************************************************************************************
ಅಂದು ಆಯುಧ ಪೂಜೆ, ಆಗಷ್ಟೇ ನನ್ನ ದ್ವಿಚಕ್ರ ವಾಹನಕ್ಕೆ ದೃಷ್ಟಿಯಾಗಬಾರದೆಂದು ನಿಂಬೆ ಹಣ್ಣು ಮೆಣಸಿನಕಾಯಿ ಮತ್ತೆ ಎರಡು ಚಿಗುರಿದ ಬಾಳೆಕಂದನ್ನು ಕಟ್ಟಿ ಪೂಜೆ ಮಾಡಿ ಸುತ್ತಾಡಿ ಬರುವ ಎಂದು ಹೊರಟೆ.  ಸ್ನೇಹಿತನನ್ನು ಭೇಟಿ ಮಾಡುವ ಎಂದು ಅವನಿಗೆ ಕರೆ ಮಾಡಿ ಅವನ ಮನೆಗೆ ಹೋದೆ. ಮನೆ ದೇವಸ್ತಾನದ ಬಳಿಯಲ್ಲಿ ಇದ್ದದ್ದರಿಂದ ನನ್ನ ದ್ವಿಚಕ್ರ ವಾಹನವನ್ನು ಅವನ ಮನೆಯ ಮುಂದೆಯೇ ನಿಲ್ಲಿಸಿ ಇಬ್ಬರೂ ಮಾತನಾಡುತ್ತ ದೇವಸ್ತಾನ ಸೇರಿದೆವು. ಕೂರುವ ಬೆಂಚಿನ ಮೇಲೆ ಕುಳಿತು ಸ್ಕೂಲಿನ ಹಳೆ ನೆನಪುಗಳು ಈಗಿನ ಬದುಕಿನ ಪುಟಗಳ ಸ್ವಲ್ಪ ಹಿಂದೆ ತಿರುವಿ  ಹರಟೆ ಶುರು ಮಾಡಿದ್ದೆವು. ಮೂರು ದೇವಸ್ತಾನಗಳು ಇದ್ದವು ಎರಡು ದೇವಸ್ತಾನಗಳು ಬಾಗಿಲು ಮುಚ್ಚಿದ್ದವು, ಒಂದು ದೇವಸ್ತಾನದಲ್ಲಿ ಬಂದವರ ವಾಹನಗಳಿಗೆ ಪೂಜೆ ಭರದಿಂದ ಸಾಗಿತ್ತು. ಒಂದರ ನಂತರ ಮತ್ತೊಂದು. ಹಾಗೆಯೇ ಒಬ್ಬರು ಆಂಟಿ ಮತ್ತು ಅವರ ಮಗ ಒಂದು ಆಕ್ಟಿವ ಸ್ಕೂಟರ್ ಮತ್ತೊಂದು ಸೈಕಲ್ಲು, ಪೂಜೆ ಮುಗಿದಿತ್ತು. ಕಣ್ಣಲ್ಲಿ ಇವೆಲ್ಲದರ ವೀಕ್ಷಣೆಯೊಂದಿಗೆ ನಮ್ಮಿಬ್ಬರ ಮಾತುಕತೆ ಮುಂದುವರೆದಿತ್ತು.
ನನ್ನ ಸ್ನೇಹಿತ ಸುಮ್ಮನೆ ಮಾತಿಗೆ, "ಏನೋ ಆ ಆಂಟಿ ಸ್ಕೂಟರ್ ನ ದೇವಸ್ತಾನ ಸುತ್ತ ರೌಂಡ್ ಹಾಕುಸ್ತರೆ ಅನ್ಸುತ್ತೆ, ಸ್ಕೂಟರ್ಗು ಪ್ರದಕ್ಷಿಣೆ ಹಾಕುಸ್ಬೋದೇನೋ ಮಗ ಅಂತ ಹೇಳಿದ ಅಷ್ಟೇ, ಪಾರ್ಕಿಂಗ್ ಮಾಡಬಹುದು ಅಂದುಕೊಂಡರೆ ಆಂಟಿ ದೇವಸ್ತಾನದ ಸುತ್ತ ತನ್ನ ಸ್ಕೂಟರ್ ಸವಾರಿ ಮಾಡಿಯೇ ಬಿಡುವುದ, ಅದರ ಜೊತೆಗೆ ತನ್ನ ಮಗನನ್ನೂ ಕೂಡ ಹಿಂದೆ ಬಾಡಿಗಾರ್ಡ್ ನಂತೆ ಕರೆದೊಯ್ದರು. ಹರಟೆ ಹೊಡೆಯುತಿದ್ದ ನಮಗೆ ಹುಸಿ ನಗು ಶುರುವಾಗಿತ್ತು, ನಂತರ ಆಂಟಿ ಹಾಗೆಯೇ ದ್ವಿಚಕ್ರವಾಹನ ಚಲಿಸಿಕೊಂಡು ನಮ್ಮ ಮುಂದೆಯೇ ಬಂದರು, ಸ್ನೇಹಿತ ಏನೋ ಆಂಟಿ ನಕ್ತವ್ರೆ ಅಂತ ಮೊಕ್ಕೆ ಹುಗ್ಯೋಕ್ ಏನಾದ್ರೂ ಬತ್ತಾವ್ರ ಅಂದ, ನೋಡಿದ್ರೆ ಇನ್ನೆರಡು ಮುಚ್ಚಿದ್ದ ದೇವಸ್ತಾನಗಳ ಪ್ರದಕ್ಷಿಣೆ ಶುರುವಾಗಿತ್ತು, ನಮ್ಮ ಹುಸಿ ನಗು ಹೊಟ್ಟೆ ಬಿರಿಯುವ ನಗುವಾಗಿತ್ತು. ಸೈಕಲ್ಲು ಹೊಡೆಯುತಿದ್ದ ಮಗನಿಗೆ ನಮ್ಮಿಬ್ಬರ ನಗು ಅರ್ಥವಾಗಿತ್ತು, ಅಮ್ಮ ನಾನು ಹೋಗ್ತೀನಿ ಅಂತ ಸೈಕಲ್ಲನ್ನು ತಿರುಗಿಸಿ ದೌಡಾಯಿಸಲು ಶುರು ಮಾಡಿದ್ದ ಅಷ್ಟರಲ್ಲಿ ಅವರ ಅಮ್ಮ ಹೇ ಬಾರೋ ಇನ್ನೊಂದು ದೇವಸ್ತಾನ ಇದೆ ಎಂದರು, ಮಗ ಸುತ್ತ ಬಂದ್ರೆ ಸೈಕಲ್ ಪಂಕ್ಚರ್ ಆಗುತ್ತೆ ನಾನ್ ಹೋಗ್ತೀನಿ ಅಂದ, ಹೇ ಏನು ಆಗಲ್ಲ  ಸುಮ್ನೆ ಬಾರೋ ಲಾಸ್ಟ್ ರೌಂಡು ಅಂತ ಹೇಳಿ ರೌಂಡ್ ಅಂದರೆ ವಾಹನಾಸೀನರಾಗಿ ಪ್ರದಕ್ಷಿಣೆ ಮುಗಿಸಿದ್ದರು. ಇವೆಲ್ಲವೂ ಕಾಮಿಡಿ ಸರ್ಕಸ್ನಂತೆ ಭಾಸವಾಗತೊಡಗಿತ್ತು. ಆದರೂ ಏನಪ್ಪಾ ಮಾಡ್ರನ್ ದುನಿಯಾ ಎಲ್ಲವೂ ಯಂತ್ರೋಮಯ ಆಗುತ್ತಿರುವ ಈ ಕಾಲದಲ್ಲಿ ಮುಂದೊಂದು ದಿನ ಮನೆಯಲ್ಲೇ ಕುಳಿತು ರೋಬೋ ಕಳಿಸಿ ದೇವರ ಬಳಿ ಪ್ರಸಾದ ಅರ್ಚನೆ ಮಾಡಿಸಿಕೊಂಡು ಬರುವಂತೆ ಹೇಳಿ ಕಳಿಸಬಹುದು. ಇರುವ ಜೀವವ ಮರೆತು ಈ ಮನುಷ್ಯ ತಾನೇ ಸೃಷ್ಟಿಕರ್ತನಾಗಲು ಹೊರಟಿದ್ದಾನೆಯೇ  ಎನ್ನುವ ಪ್ರಶ್ನೆಯೂ ಕಾಡತೊಡಗಿತ್ತು! ಅಯ್ಯೋ ಬಾರಪ್ಪ ಇರ್ಲಿ ಪ್ರಪಂಚದ ಬಗ್ಗೆ ಯೋಚನೆ ಮಾಡ್ತಾ ಕುಂತ್ರೆ ನಾವ್ ಜೀವನವೆಲ್ಲ ಹಿಂಗೆ ಕುಂತಿರ್ತಿವಿ ಅಂತ ಅವನ ಮನೆಯ ಬಳಿ ಹೋದರೆ, ಸಣ್ಣ ಎರಡು ಬಾಳೆ ಗಿಡ ಅಂದುಕೊಂಡು ಬೀದಿ ಹಸು ನನ್ನ ದ್ವಿಚಕ್ರವಾಹನದಲ್ಲಿದ್ದ ಬಾಳೆಕಂದಿನ ಎಲೆಗಳನ್ನು ಪೂರ್ತಿ ತಿಂದು ಮುಗಿಸಿ ಹೊರಟು ಹೋಗಿತ್ತು.ಬಾಡಿ ಕೊಳೆತುಹೋಗಬೇಕಿದ್ದ ಆ ಚಿಗುರೆಲೆ ಆ ಹಸುವಿನ ಹೊಟ್ಟೆಯ ಹಸಿವ ಸ್ವಲ್ಪ ಮಟ್ಟಿಗೆ ತಣಿಸಿತಲ್ಲ ಎಂಬ ಸಂತಸವಾಯಿತು. ಹಾಗೆಯೇ ಮತ್ತೊಂದು ಪ್ರಶ್ನೆ, ಹೌದಲ್ಲವೇ!! ಈ ರೀತಿ ಎಷ್ಟೋ ಹಸಿವಿನಿಂದ ಬಳಲುವವರಿಗೆ ನಾವು ಅಲ್ಲಿ ಇಲ್ಲಿ ತೋರಿಕೆಗೆ ಆಡಂಬರಕ್ಕೆ ದುಂದು ವ್ಯಚ್ಚ ಮಾಡುತ್ತೇವೆ. ಕೈಲಾಗದ ಮನಗಳಿಗೆ ಸಹಾಯ ಹಸ್ತ ನೀಡಿದರೆ ಅವರ ಆಶಿರ್ವಾದವೇ ದೈವ ನೀಡುವ ವರವಲ್ಲವೇ!!
***********************************************************************************************

1 comment:

  1. ಈಗ ದೇವರೂ commercial ಅಪ್ಪಾ! ನಮ್ಮ ಬೆಂಗಳೂರಿನ ಕಸ್ತೂರ್ಬಾ ರಸ್ತೆಯ ದೇವಸ್ತಾನಕ್ಕೆ accident ಗಣೇಶ ಅಂತ್ಲೇ famousಊ. 

    ReplyDelete